ಕ್ರೀಡೆಮಂಗಳೂರುಹಬ್ಬ

ನವೆಂಬರ್‌ನಲ್ಲಿ ತುಳು ಉತ್ಸವ ರೀತಿ ವೈವಿಧ್ಯಮಯ ಕಾರ್ಯಕ್ರಮ

Pilikula kambala

ಪಿಲಿಕುಳನಿಸರ್ಗಧಾಮದಲ್ಲಿ ಜಿಲ್ಲಾಡಳಿತದ ವತಿಯಿಂದ ನವೆಂಬರ್‌ತಿಂಗಳಲ್ಲಿ ಕಂಬಳ ಸೇರಿದಂತೆ ‘ತುಳು ಉತ್ಸವ’ ನಡೆಯಲು ತೀರ್ಮಾನಿಸಲಾಗಿದೆ. ದಿನಾಂಕ ಇನ್ನಷ್ಟೇ ನಿಗದಿ ಮಾಡಬೇಕಿದೆ.ಈ ಕುರಿತು ಮುತುವರ್ಜಿ ವಹಿಸಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಪಿಲಿಕುಳಕ್ಕೆ ಭೇಟಿ ລລ, ಸಂಬಂಧಿತರೊಂದಿಗೆ ಚರ್ಚಿಸಿದ್ದಾರೆ. ಪಿಲಿಕುಳದಲ್ಲಿ ತುಳುನಾಡಿನ ಕಂಬಳ ಸೇರಿದಂತೆ ತುಳು ಸಂಸ್ಕೃತಿ, ಆಚಾರ ವಿಚಾರ ಬಿಂಬಿಸುವ ವಿವಿಧ ಕಾರ್ಯಕ್ರಮಗಳನ್ನೊಂಡ ಪಿಲಿಕುಳೋತ್ಸವ ನಡೆಸುವಂತೆ ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಅವರು ಮುಖ್ಯಮಂತ್ರಿಗೆ ಕೋರಿಕೆ ಸಲ್ಲಿಸಿದ್ದರು. ಈ ಬಗ್ಗೆ ಜಿಲ್ಲಾಧಿಕಾರಿಗೂ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಕಂಬಳ ಆಯೋಜನೆಗೆ ಸಿದ್ಧತೆ ನಡೆದಿದೆ. ಪಿಲಿಕುಳದಲ್ಲಿ ಸ್ಥಳ ಪರಿಶೀಲನೆಸಂದರ್ಭ ಮುಡಾ ಆಯುಕ್ತ ನೂರ್‌ಜಹಾನ್, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷಡಾ.ದೇವಿಪ್ರಸಾದ್ ಶೆಟ್ಟಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ್ ಆಳ್ವ ದ.ಕ. ಜಿಲ್ಲಾ ಕಂಬಳ ಸಮಿತಿ ಉಪಾಧ್ಯಕ್ಷ ನವೀನ್‌ಚಂದ್ರ ಆಳ್ವ ತಿರುವೈಲುಗುತ್ತು, ಕಂಬಳ ಸಮಿತಿ ಮಾಜಿ ಅಧ್ಯಕ್ಷ ಪಿ.ಆರ್. ಶೆಟ್ಟಿ, ತೀರ್ಪುಗಾರರಾದ ವಿಜಯ ಕುಮಾ‌ರ್ ಕಂಗಿನಮನೆ, ನವೀನ್ ಅಂಬೂರಿ ಇದ್ದು ಚರ್ಚೆ ನಡೆಸಿದರು.

ಪಿಲಿಕುಳದಲ್ಲಿ ಕಂಬಳ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ತುಳು ಉತ್ಸವದ ರೀತಿಯಲ್ಲಿ ಆಯೋಜಿಸಲು ಸಿದ್ಧತೆ ಮಾಡಲಾಗಿದೆ. ನವೆಂಬರ್ ಮೊದಲ ಅಥವಾ ಎರಡನೇ ವಾರದಲ್ಲಿ ನಡೆಸಲು ಸದ್ಯಕ್ಕೆ ತೀರ್ಮಾನಿಸಲಾಗಿದೆ. ದಿನಾಂಕ ಇನ್ನೂ ನಿಗದಿಯಾಗಿಲ್ಲ. ಶೀಘ್ರದಲ್ಲಿ ಕಾರ್ಯಕ್ರಮದ ರೂಪುರೇಷೆ ಮತ್ತು ದಿನಾಂಕವನ್ನು ತಿಳಿಸಲಾಗುವುದು.

* ಮುಲೈ ಮುಗಿಲನ್ ಎಂ.ಪಿ. ಜಿಲ್ಲಾಧಿಕಾರಿ

Related posts

ಸಿಎಂ ಪ್ರತಿಕೃತಿ ದಹನ: ಶಾಸಕ ಯಶ್ವಾಲ್ ಸುವರ್ಣ ಮತ್ತಿತರರ ಮೇಲೆ ಎಫ್‌ಐಆ‌ರ್

kudlaadmin

ಗಣೇಶೋತ್ಸವ, ಈದ್ ಮಿಲಾದ್: ಸಂಘಟಕರಿಗೆ ಪೊಲೀಸರ ಸೂಚನೆ

kudlaadmin

ಬಿಜೆಪಿ ಮುಖಂಡ ಪುತ್ತಿಲ ವಿರುದ್ಧಲೈಂಗಿಕ ದೌರ್ಜನ್ಯ ಕೇಸ್

kudlaadmin

Leave a Comment